
Uppinangadi:- ಕಾಡಾನೆ ತಿವಿತಕ್ಕೊಳಗಾಗಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 15 ಲಕ್ಷ ರೂ.ಪರಿಹಾರ ಮಂಜೂರು. 5 ಲಕ್ಷದ ಚೆಕ್ ಹಸ್ತಾಂತರ.
Wednesday, January 4, 2023
ಉಪ್ಪಿನಂಗಡಿ
ಮೂರು ದಿನದ ಹಿಂದೆ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಶಿರಾಡಿ ಗ್ರಾಮದ ಜನತಾ ಕಾಲೋನಿ ನಿವಾಸಿ ತಿಮ್ಮಪ್ಪರವರ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ ಮಂಜೂರಾದ 15 ಲಕ್ಷ ರೂಪಾಯಿ ಮೊತ್ತದಲ್ಲಿ 5 ಲಕ್ಷ ರೂ.,ಪರಿಹಾರ ಮೊತ್ತದ ಚೆಕ್ ಅನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.
ಅರಣ್ಯ ಇಲಾಖೆಯಿಂದ ಸುಮಾರು 15 ಲಕ್ಷ ರೂಪಾಯಿ ಪರಿಹಾರ ಧನವು ಮಂಜೂರುಗೊಂಡಿದ್ದು, ಈ ಪೈಕಿ 5 ಲಕ್ಷ ರೂ.ಮೊತ್ತದ ಚೆಕ್ ಅನ್ನು ಅರಣ್ಯ ಇಲಾಖೆ ಅಧಿಕಾರಿಗಳು ಅವರ ಕುಟುಂಬಕ್ಕೆ ಹಸ್ತಾಂತರ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿದ ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಜಯಪ್ರಕಾಶ್ ಅವರು ಈಗಾಗಲೇ ಭದ್ರಾ ಟೈಗರ್ ಫೌಂಡಷನ್ ಚಿಕ್ಕಮಗಳೂರು ಇವರ ಸಹಕಾರದೊಂದಿಗೆ ಸುಮಾರು 5ಲಕ್ಷ ಮೊತ್ತದ ಚೆಕ್ ಅನ್ನು ಸಂತ್ರಸ್ತರಿಗೆ ಇಂದು ಹಸ್ತಾಂತರ ಮಾಡಿದ್ದೇವೆ. ಉಳಿದ 10ಲಕ್ಷ ಮೊತ್ತವನ್ನು ಕೆಲವು ದಾಖಲೆ ಪತ್ರಗಳು ಸರಿಯಾದ ಕೂಡಲೇ ಮೃತರ ಕುಟುಂಬಕ್ಕೆ ನೀಡಲಾಗುವುದು ಎಂದಿದ್ದಾರೆ.
ಅರಣ್ಯ ಇಲಾಖೆಯ ಡಿಸಿಎಫ್ ಡಾ.ದಿನೇಶ್ಕುಮಾರ್, ಎಸಿಎಫ್ ವಿ.ಪಿ.ಕಾರ್ಯಪ್ಪ, ಆರ್ಎಫ್ಒ ಜಯಪ್ರಕಾಶ್ ಕೆ.ಕೆ., ಡಿಆರ್ಎಫ್ಒ ಧೀರಜ್, ಫಾರೆಸ್ಟರ್ ಸುನಿಲ್ ನಾಯ್ಕ್ರವರು ಚೆಕ್ ಹಸ್ತಾಂತರಿಸಿದರು.