-->
ಉಡುಪಿ- ಶಾಲೆಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ಕಾಡಿಗೆ ಎಳೆದೊಯ್ದು ಅತ್ಯಾಚಾರ- ಆರೋಪಿಗೆ 10 ವರ್ಷಗಳ ಕಠಿಣ ಸಜೆ

ಉಡುಪಿ- ಶಾಲೆಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ಕಾಡಿಗೆ ಎಳೆದೊಯ್ದು ಅತ್ಯಾಚಾರ- ಆರೋಪಿಗೆ 10 ವರ್ಷಗಳ ಕಠಿಣ ಸಜೆ


ಉಡುಪಿ: ಕೋಟ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 5 ವರ್ಷಗಳ ಹಿಂದೆ ನಡೆದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧಿಸಿ ಆರೋಪಿಗೆ ಪೋಕ್ಸೋ ಕಾಯಿದೆಯಡಿ 10 ವರ್ಷ ಗಳ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯ  ಆದೇಶಿಸಿದೆ.

ಕೋಟ ಠಾಣೆ ವ್ಯಾಪ್ತಿಯ ನಿವಾಸಿ ವಿಘ್ನೇಶ್ ನಾಯ್ಕ್ (30) ಆರೋಪಿ, ನೊಂದ ಅಪ್ರಾಪ್ತ ಬಾಲಕಿಯ ಮನೆಗೆ ಬಾವಿ ಕೆಲಸಕ್ಕೆಂದು ಬಂದಿದ್ದ ಆರೋಪಿ ಬಾಲಕಿಯ ಪರಿಚಯ ಮಾಡಿಕೊಂಡು ಬಾಲಕಿಗೆ ಮೊಬೈಲ್ ಫೋನ್ ಮೂಲಕ ಸಂದೇಶ ಕಳುಹಿಸಿ ಪ್ರೀತಿ ಮಾಡುವಂತೆ ಒತ್ತಾಯಿಸುತ್ತಿದ್ದ. ಅಲ್ಲದೇ ಬಾಲಕಿ ಶಾಲೆಗೆ ಹೋಗಿ ಬರುವಾಗೆಲ್ಲ ಹಿಂಬಾಲಿಸಿಕೊಂಡು ಬಂದು ಕಿರುಕುಳ ನೀಡುತ್ತಿದ್ದ.

2018 ರ ಡಿಸೆಂಬರ್‌ನಲ್ಲಿ ನೊಂದ ಬಾಲಕಿ ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಆರೋಪಿ ದಾರಿ ಮಧ್ಯೆ ಆಕೆಯನ್ನು ಅಡ್ಡಗಟ್ಟಿ ಅಲ್ಲೇ ಪಕ್ಕದ ಕಾಡಿಗೆ ಎಳೆದುಕೊಂಡು ಹೋಗಿ ಬಲವಂತವಾಗಿ ದೈಹಿಕ ದೌರ್ಜನ್ಯ ಎಸಗಿದ್ದ. ಆ ಬಳಿಕವೂ ಆಕೆಯನ್ನು ತಡೆದು ನಿಲ್ಲಿಸಿ ದೈಹಿಕ ಸಂಪರ್ಕ ನಡೆಸಿದ್ದ. ಅಲ್ಲದೇ ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ತಾಯಿ, ತಮ್ಮನನ್ನು ಕೊಲ್ಲುವುದಾಗಿ ಬೆದರಿಕೆಯೊಡ್ಡಿದ್ದ. ಗಾಬರಿಗೊಂಡ ಬಾಲಕಿ ಈ ವಿಚಾರವನ್ನು ಯಾರಲ್ಲೂ ಹೇಳಿರಲಿಲ್ಲ.

ತನ್ನ ಶಾಲೆಯಲ್ಲಿ 1098 ಮಕ್ಕಳ ಸಹಾಯವಾಣಿಯ ಬಗ್ಗೆ  ತಿಳಿದುಕೊಂಡು ಸಹಾಯವಾಣಿಗೆ ಕರೆ ಮಾಡಿ ವಿಷಯ ತಿಳಿಸಿ ದ್ದಳು. ಈ ಬಗ್ಗೆ ಆಗಿನ ಮಕ್ಕಳ ರಕ್ಷಣಾಧಿಕಾರಿ ಪ್ರಭಾಕರ ಆಚಾರ್ಯ ನೊಂದ ಬಾಲಕಿಯನ್ನು ರಕ್ಷಿಸಿ ಆರೋಪಿಯ ವಿರುದ್ಧ ದೂರು ದಾಖಲಿಸಿದ್ದರು.

ಪ್ರಕರಣದ ತನಿಖೆಯನ್ನು ಉಡುಪಿ ಮಹಿಳಾ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಜಯಂತ್ ಎಂ. ತನಿಖೆ ನಡೆಸಿ ಆರೋ ಪಿಯ ವಿರುದ್ದ ದೋಷರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಆರೋಪಿ ವಿರುದ್ಧ ಆರೋಪ ಸಾಬೀತಾಗಿದೆ ಎಂದು ಪ್ರಕಟಿಸಿ ಆರೋಪಿಗೆ ಹತ್ತು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ಒಟ್ಟು 21,500 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.

ದಂಡದ ಹಣದಲ್ಲಿ 5 ಸಾವಿರ ರೂ. ಸರಕಾರಕ್ಕೆ ಮತ್ತು 10500 ರೂ. ನೊಂದ ಬಾಲಕಿಗೆ ಪರಿಹಾರ ಆಗಿ ನೀಡುವಂತೆ ಮತ್ತು ಸರಕಾರದಿಂದ 2 ಲಕ್ಷರೂ. ಹಣವನ್ನು ನೊಂದ ಬಾಲಕಿಗೆ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಈ ಬಗ್ಗೆ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ವಾದ ಮಂಡಿಸಿದ್ದರು.

Ads on article

Advertise in articles 1

advertising articles 2

Advertise under the article