-->
ಪ್ರೀತಿಗೆ ಮನೆಯವರ ವಿರೋಧ ವಿಷ ಸೇವನೆ: ಪ್ರಿಯಕರ ಸಾವು, ಪ್ರೇಯಸಿ ಸ್ಥಿತಿ ಚಿಂತಾಜನಕ

ಪ್ರೀತಿಗೆ ಮನೆಯವರ ವಿರೋಧ ವಿಷ ಸೇವನೆ: ಪ್ರಿಯಕರ ಸಾವು, ಪ್ರೇಯಸಿ ಸ್ಥಿತಿ ಚಿಂತಾಜನಕ

ರಾಮನಗರ: ಪ್ರೀತಿಗೆ ಮನೆಯವರ ಒಪ್ಪಿಗೆ ಸಿಗಲಿಲ್ಲವೆಂದು ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹೊಗೇನಕಲ್ ಜಲಪಾತದ ಬಳಿ ನಡೆದಿದೆ. ಈ ದುರ್ಘಟನೆಯಲ್ಲಿ ಯುವಕ ಮೃತಪಟ್ಟಿದ್ದು, ಯುವತಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ಧಾರೆ.

ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ಚಾಮುಂಡಿಪುರದ ನಿವಾಸಿ ಉಮೇಶ್ (24)​ ಹಾಗೂ ಆತನ ಪ್ರೇಯಸಿ ಒಂದೇ ಊರಿನವರರಾಗಿದ್ದರು. ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರು ಬೇರೆ ಬೇರೆ ಜಾತಿಯವರಾಗಿದ್ದ ಹಿನ್ನೆಲೆಯಲ್ಲಿ ಇವರ ಪ್ರೀತಿಗೆ ಮನೆಯಲ್ಲಿ ಒಪ್ಪಿಗೆ ದೊರಕಿರಲಿಲ್ಲ. ಆದ್ದರಿಂದ ಸೆಪ್ಟೆಂಬರ್​ 9ರಂದು ಪ್ರೇಮಿಗಳಿಬ್ಬರು ಗ್ರಾಮದಿಂದ ನಾಪತ್ತೆಯಾಗಿದ್ದರು.

ಈ ಸಂಬಂಧ ಯುವಕ ಹಾಗೂ ಯುವತಿಯ ಕುಟುಂಬಸ್ಥರು ಕೋಡಿಹಳ್ಳಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಅಧಿಕಾರಿಗಳು ಕಾಣೆಯಾಗಿರುವವರ ಫೋಟೋಗಳನ್ನು ಎಲ್ಲಾ ಠಾಣೆಗೆ ಕಳುಹಿಸಿ ಕೊಟ್ಟಿದ್ದರು. ಮಂಗಳವಾರ ಬೆಳಗ್ಗೆ ಹೊಗೇನಕಲ್​ ಜಲ್ಪಪಾತದ ಬಳಿ ಪ್ರೇಮಿಗಳಿಬ್ಬರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದೆ.

ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು ಕಾಣೆಯಾಗಿರುವ ಪ್ರೇಮಿಗಳು ಇವರೇ ಎಂಬುದು ಖಚಿತಪಡಿಸಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಯುವಕ ಉಮೇಶ್​ ಮೃತಪಟ್ಟಿದ್ದಾನೆ. ಯುವತಿಯ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article