-->
ಕೇರಳದ ಗುರುವಾಯೂರಪ್ಪನಿಗೆ ಚಿನ್ನದ ಕಿರೀಟ - ಶ್ರೀಕೃಷ್ಣ ಜನ್ಮಾಷ್ಟಮಿಗೆ ಚಿನ್ನದ ವ್ಯಾಪಾರಿಯ ಉಡುಗೊರೆ

ಕೇರಳದ ಗುರುವಾಯೂರಪ್ಪನಿಗೆ ಚಿನ್ನದ ಕಿರೀಟ - ಶ್ರೀಕೃಷ್ಣ ಜನ್ಮಾಷ್ಟಮಿಗೆ ಚಿನ್ನದ ವ್ಯಾಪಾರಿಯ ಉಡುಗೊರೆ

ಗುರುವಾರ: ಈ ಬಾರಿಯ ಕೃಷ್ಣ ಜನ್ಮಾಷ್ಟಮಿಯ ರೋಹಿಣಿ ನಕ್ಷತ್ರದಂದು ಪ್ರಸಿದ್ಧ ಗುರುವಾಯೂರು ದೇವಾಲಯದ ಶ್ರೀಕೃಷ್ಣನು ಚಿನ್ನದ ಕಿರೀಟದಿಂದ ಕಂಗೊಳಿಸಲಿದ್ದಾನೆ. ಕೇರಳದ ಚಿನ್ನದ ಉದ್ಯಮಿರೊಬ್ಬರು ಈ ಕಿರೀಟವನ್ನು ಗುರುವಾಯೂರಪ್ಪನಿಗೆ ಹರಕೆಯ ರೂಪದಲ್ಲಿ ಸಲ್ಲಿಸಿದ್ದಾರೆ.

ಸೆ.6ರಂದು ಶ್ರೀಕೃಷ್ಣ ಜನ್ಮಾಷ್ಟಮಿಯಿದೆ. ಅದೇ ದಿನ ಚಿನ್ನದ ಕಿರೀಟವನ್ನು ಗುರುವಾಯೂರಪ್ಪನಿಗೆ ಅರ್ಪಿಸಲಾಗುತ್ತದೆ. ತಮಿಳುನಾಡಿನ ಕೊಯಮತ್ತೂರಿನಲ್ಲಿ ಚಿನ್ನದ ವ್ಯಾಪಾರ ನಡೆಸುವ ಕೇರಳದ ತ್ರಿಶ್ಶೂರು ಜಿಲ್ಲೆಯ ಕೈನೂರು ತರವಾಡು ಮೂಲದ ಕೆ.ವಿ. ರಾಜೇಶ್​ ಆಚಾರ್ಯ ಈ ಉಡುಗೊರೆ ನೀಡುತ್ತಿದ್ದಾರೆ. ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಅವರು ಗುರುವಾಯೂರಪ್ಪನಿಗೆ ಈ ಉಡುಗೊರೆ ನೀಡುತ್ತಿದ್ದಾರಂತೆ. ಈ ಚಿನ್ನದ ಕಿರೀಟ 38 ಸವರನ್​ ತೂಕವಿದೆ. ಜನ್ಮಾಷ್ಟಮಿ ದಿನ ಕಾಣಿಕೆಯಾಗಿ ಸ್ವೀಕರಿಸಿದ ವಸ್ತುಗಳನ್ನು ವಿಗ್ರಹದ ಮೇಲೆ ಧರಿಸಲಾಗುತ್ತದೆ. ಆ ಬಳಿಕ ಇದನ್ನು ದೇವಸ್ವಂನ ರಿಜಿಸ್ಟರ್‌ನಲ್ಲಿ ದಾಖಲಿಸಿ, ಸುರಕ್ಷಿತ ಲಾಕರ್‌ಗೆ ವರ್ಗಾಯಿಸಲಾಗುತ್ತದೆ.

ಕಳೆದ ತಿಂಗಳು ತಮಿಳುನಾಡು ಸಿಎಂ ಸ್ಟಾಲಿನ್ ಅವರ ಪತ್ನಿ ದುರ್ಗಾ ಅವರು ಗುರುವಾಯೂರಪ್ಪನವರಿಗೆ 32 ಸವರನ್​ ಚಿನ್ನದ ಕಿರೀಟವನ್ನು ಕಾಣಿಕೆಯಾಗಿ ಅರ್ಪಿಸಿದ್ದರು. ಅಲ್ಲದೆ, ಚಥಯಂ ದಿನದಂದು ಗುರುವಾಯೂರಪ್ಪನವರಿಗೆ ಸುಮಾರು ನೂರು ಸವರನ್​ ತೂಕದ ಚಿನ್ನದ ಕಿಂಡಿಯನ್ನು ಕಾಣಿಕೆಯಾಗಿ ಸ್ವೀಕರಿಸಲಾಯಿತು. ಇದನ್ನು ಟಿವಿಎಸ್ ಗ್ರೂಪ್ ಪ್ರಸ್ತುತಪಡಿಸಿದೆ. ಉದ್ಯಮಿ ಡಾ. ರವಿ ಪಿಳ್ಳೈ ಅವರು 2021ರ ಸೆಪ್ಟೆಂಬರ್​ನಲ್ಲಿ 725 ಗ್ರಾಂ ಚಿನ್ನದ ಕಿರೀಟವನ್ನು ಉಡುಗೊರೆಯಾಗಿ ನೀಡಿದ್ದರು. 

Ads on article

Advertise in articles 1

advertising articles 2

Advertise under the article