-->
MANGALORE: ವಿದ್ಯಾರ್ಥಿನಿಗೆ ಎದೆನೋವು- ಬಸ್ ಆನ್ನೆ ಆಸ್ಪತ್ರೆಗೆ ತಂದು ಚಿಕಿತ್ಸೆಗೆ ದಾಖಲಿಸಿದ ಚಾಲಕ ನಿರ್ವಾಹಕ

MANGALORE: ವಿದ್ಯಾರ್ಥಿನಿಗೆ ಎದೆನೋವು- ಬಸ್ ಆನ್ನೆ ಆಸ್ಪತ್ರೆಗೆ ತಂದು ಚಿಕಿತ್ಸೆಗೆ ದಾಖಲಿಸಿದ ಚಾಲಕ ನಿರ್ವಾಹಕ

 





ಮಂಗಳೂರು:ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ  ಹಠಾತ್ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಸ್ ಚಾಲಕ ಮತ್ತು‌ ನಿರ್ವಾಹಕ ಬಸ್ ಅನ್ನು ನಿಗದಿತ ರೂಟ್ ನಲ್ಲಿ ಎಲ್ಲಿಯೂ ನಿಲ್ಲಿಸದೆ ಆಸ್ಪತ್ರೆಗೆ ತಂದು ಚಿಕಿತ್ಸೆಗೆ ದಾಖಲಿಸಿದ ಘಟನೆ ಮಂಗಳವಾರ ನಡೆದಿದೆ.


ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.





 ಕೃಷ್ಣಪ್ರಸಾದ್ ಎಂಬ ಹೆಸರಿನ ಖಾಸಗಿ ಬಸ್ಸಿನಲ್ಲಿ ಮಂಗಳವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.  ರೂಟ್ ನಂ.13F ಕೃಷ್ಣಪ್ರಸಾದ್ ಬಸ್ ಮಂಗಳಾದೇವಿ-ಕುಂಜತ್ತಬೈಲ್ ನಡುವೆ ಸಂಚರಿಸುತ್ತದೆ.  ಎಂದಿನಂತೆ ಈ ಬಸ್ ಕೂಳೂರು ಮಾರ್ಗವಾಗಿ ಮಂಗಳಾದೇವಿ ಕಡೆಗೆ ಸಂಚರಿಸುತ್ತಿತ್ತು. ಬಂಗ್ರಕೂಳೂರಿನಲ್ಲಿ  ಸುಮಾರು 15 ಮಂದಿ ಯೆನಪೋಯ ಕಾಲೇಜು ವಿದ್ಯಾರ್ಥಿಗಳು ಬಸ್ ಹತ್ತಿದ್ದಾರೆ‌. ಬಸ್ ಕೊಂಚ ಮುಂದೆ ಹೋಗಿ ಇನ್ನೇನು ಕೊಟ್ಟಾರ ತಲುಪುತ್ತಿದ್ದಂತೆ ಏಕಾಏಕಿ ಓರ್ವ ವಿದ್ಯಾರ್ಥಿನಿಗೆ ಎದೆನೋವು ಕಾಣಿಸಿಕೊಂಡಿದೆ. ಈ ವೇಳೆ  ಚಾಲಕ ಗಜೇಂದ್ರ ಕುಂದರ್ ಮತ್ತು ನಿರ್ವಾಹಕರಾದ ಮಹೇಶ್ ಪೂಜಾರಿ ಹಾಗೂ ಸುರೇಶ್ ಬಸ್ ಅನ್ನು ನೇರ ಆಸ್ಪತ್ರೆಗೆ ಕೊಂಡೊಯ್ಯುವ ನಿರ್ಧಾರ ಮಾಡಿದ್ದಾರೆ.


ಗಜೇಂದ್ರ ಕುಂದರ್ ಆ್ಯಂಬುಲೆನ್ಸ್ ಮಾದರಿಯ ಸೈರಾನ್ ಹಾಕಿಕೊಂಡು ಬಸ್ ಅನ್ನು ಎಲ್ಲೂ ನಿಲ್ಲಿಸದೆ ಚಲಾಯಿಸಿದ್ದು, 6 ಕಿ.ಮೀ. ದೂರವನ್ನು ಕೇವಲ 6 ನಿಮಿಷಗಳಲ್ಲಿ ಕ್ರಮಿಸಿ   ಆಸ್ಪತ್ರೆ ತಲುಪಿದ್ದಾರೆ. ಆಸ್ಪತ್ರೆಯ ಸೆಕ್ಯುರಿಟಿ, ಮತ್ತೊಂದು ಎಂದು ಯಾವುದನ್ನು ಗಣನೆಗೆ ತೆಗೆದುಕೊಳ್ಳದೆ ಬಸ್‌ ಅನ್ನು ಆವರಣದೊಳಗಡೆ ಕೊಂಡೊಯ್ದು ನಿಲ್ಲಿಸಿದ್ದಾರೆ. ಈ ಮೂಲಕ ವಿದ್ಯಾರ್ಥಿನಿಗೆ ಕ್ಲಪ್ತ ಸಮಯದಲ್ಲಿ ಚಿಕಿತ್ಸೆ ದೊರೆಯುವಂತೆ ಮಾಡಿದ್ದಾರೆ. 

Ads on article

Advertise in articles 1

advertising articles 2

Advertise under the article