ಫೆ.14 : ಪೆರ್ವಾಜೆ ಶ್ರೀ ಶಿರ್ಡಿ ಸಾಯಿಬಾಬಾ ಮಂದಿರದ 12ನೇ ಪ್ರತಿಷ್ಠಾ ವರ್ಧಂತ್ಯುತ್ಸವ
Monday, February 10, 2025
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪೆರ್ವಾಜೆ ಶಾಸ್ತಾವಿನ ಶ್ರೀ ಶಿರ್ಡಿ ಸಾಯಿಬಾಬಾ ಮಂದಿರದ 12ನೇ ಪ್ರತಿಷ್ಠಾ ವರ್ಧಂತ್ಯುತ್ಸವ ಫೆಬ್ರವರಿ 14 ರಂದು ಬೆಳಿಗ್ಗೆ 6-00ರಿಂದ ಸಂಜೆ 8-00ರ ವರೆಗೆ ನಡೆಯಲಿದೆ.
ಬೆಳಿಗ್ಗೆ ಗಂಟೆ 6-15ಕ್ಕೆ ದ್ವಾರ ಪೂಜೆ, ಬೆಳಿಗ್ಗೆ ಗಂಟೆ 6-45ಕ್ಕೆ ಪ್ರಾತಃ ಪೂಜೆ ಬೆಳಿಗ್ಗೆ ಗಂಟೆ 9 ಕ್ಕೆ ಶ್ರೀ ಬಾಬಾರವರಿಗೆ ಕಲಶಾಭಿಷೇಕ, ಮಧ್ಯಾಹ್ನ ಗಂಟೆ 12-45ಕ್ಕೆ ಮಹಾಪೂಜೆ ನಂತರ ಅನ್ನ ಸಂತರ್ಪಣೆ, ಸಂಜೆ ಗಂಟೆ 5ಕ್ಕೆ ಸೇವಾ ಕಾರ್ಯಕ್ರಮ, ಭಜನಾ ಕಾರ್ಯಕ್ರಮಗಳು ರಾತ್ರಿ ಗಂಟೆ 8 ಕ್ಕೆ ಮಹಾಪೂಜೆ ನಂತರ ಅನ್ನಸಂತರ್ಪಣೆ ನಡೆಯಲಿದೆ.
ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಶ್ರೀ ಸಾಯಿಬಾಬಾರವರ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಗೌರವ ಅಧ್ಯಕ್ಷ ಕೆ. ಕಮಲಾಕ್ಷ ಕಾಮತ್, ಆಡಳಿತ ಮೊಕ್ತೆಸರರಾದ ಶ್ರೀಮತಿ ಲಲಿತಾ ಸುವರ್ಣ ಅಭಿಷೇಕ್ ಸುವರ್ಣ, ಪ್ರಧಾನ ಅರ್ಚಕ ಹಾಗೂ ವ್ಯವಸ್ಥಾಪಕರಾದ ಲಕ್ಷ್ಮೀನಾರಾಯಣ ಭಟ್, ಪ್ರಪುಲ್ಲ ಶೆಟ್ಟಿ ವಿನಂತಿಸಿದ್ದಾರೆ.